ಚುನಾವಣಾ ಪ್ರಚಾರ ಕೈಗೊಳ್ಳಲು ಮಹಾರಾಷ್ಟ್ರದ ನಾಂದೇಡಕ್ಕೆ ಅವರು ಕಾರಿನಲ್ಲಿ ತೆರಳುತ್ತಿದ್ದರು. ಸೋಲ್ಲಾಪುರ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರಿನ ಏರ್ಬ್ಯಾಗ್ಗಳು ತೆರೆದುಕೊಂಡಿದ್ದರಿಂದ ಹೆಚ್ಚಿನ ಗಾಯಗಳಾಗಿಲ್ಲ. ಅಂಜಲಿ, ಕಾರು ಚಾಲಕ ಮಹಾದೇವ ಹಾಗೂ ಅಂಗರಕ್ಷಕ ಸಯ್ಯದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇವರೆಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಆರೋಗ್ಯ ಸ್ಥಿರವಾಗಿದೆ ಎಂದು ಸಮೀಪವರ್ತಿಗಳು ತಿಳಿಸಿದ್ದಾರೆ.