ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ. ವಿರುದ್ಧದ ಖಾಸಗಿ ದೂರು: ಪೊಲೀಸರಿಗೆ ವರ್ಗಾಯಿಸಿದ ಕೋರ್ಟ್

Last Updated 2 ಮೇ 2019, 19:42 IST
ಅಕ್ಷರ ಗಾತ್ರ

ಬೆಂಗಳೂರು: ‘ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳ ದಾಳಿ ಖಂಡಿಸಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ
ನೇತೃತ್ವದಲ್ಲಿ ಐ.ಟಿ.ಕಚೇರಿ ಮುಂದೆ ಕಳೆದ ತಿಂಗಳು ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲು ನಿರ್ದೇಶಿಸಬೇಕು’ ಎಂಬ ಖಾಸಗಿ ದೂರನ್ನು ಇಲ್ಲಿನ ಜನಪ್ರತಿನಿಧಿಗಳ ಕೋರ್ಟ್‌ ಪೊಲೀಸರಿಗೆ ವರ್ಗಾಯಿಸಿದೆ.

ಈ ಕುರಿತಂತೆ ಎ.ಮಲ್ಲಿಕಾರ್ಜುನ ಸಲ್ಲಿಸಿರುವ ದೂರನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು ಗುರುವಾರ ವಿಚಾರಣೆ ನಡೆಸಿ, ಮುಂದಿನ ಕ್ರಮಕ್ಕೆ ದೂರನ್ನು ಕಮರ್ಶಿಯಲ್‌ ಸ್ಟ್ರೀಟ್‌ ಪೊಲೀಸ್‌ಠಾಣೆಗೆ ವರ್ಗಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT