ಡಿ.15ರಂದು ನಡೆದ ಸಮಾರಂಭದಲ್ಲಿ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಎಸ್ಪಿ ಬಿ.ಎಂ. ಲಕ್ಷ್ಮೀಪ್ರಸಾದ್ ಅವರ ಉಪಸ್ಥಿತಿಯಲ್ಲೇ ಅಲ್ಲಿನ ವಿದ್ಯಾರ್ಥಿಗಳು 15 ನಿಮಿಷಗಳ ಪ್ರಹಸನ ಪ್ರದರ್ಶಿಸಿದ್ದರು. ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ ಘಟನೆ ಮತ್ತು ರಾಮ ಮಂದಿರ ನಿರ್ಮಾಣದ ಕಾರ್ಯವನ್ನೂ ಅದರಲ್ಲಿ ಮಕ್ಕಳು ಪ್ರದರ್ಶಿಸಿದ್ದರು.