ರಾಯಚೂರು:ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಶಾಸಕ ಶಿವನಗೌಡ ನಾಯಕ ವಿರುದ್ಧ ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಜಾ ಪ್ರತಿನಿಧಿ ಕಾಯ್ದೆ ಸೆಕ್ಷನ್135 ಹಾಗೂ ಐಪಿಸಿ ಸೆಕ್ಷನ್ 153(ಎ) ಅಡಿ ಪ್ರಕರಣ ದಾಖಲಾಗಿದೆ. ಶಾಸಕ ಶಿವನಗೌಡ ನಾಯಕ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲಾ ಜೆಡಿಎಸ್ ಮುಖಂಡರು ಜಿಲ್ಲಾ ಚುನಾವಣಾಧಿಕಾರಿಗೆ ಈಚೆಗೆ ದೂರು ಸಲ್ಲಿಸಿದ್ದರು.
ಜಿಲ್ಲೆಯ ಸಿರವಾರದಲ್ಲಿ ಏಪ್ರಿಲ್ 16 ರಂದು ಅಯೋಜಿಸಿದ್ದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಶಿವನಗೌಡ ನಾಯಕ ಅವರು ‘ಗಾಂಡು..’ ಎನ್ನುವ ಅವಹೇಳನಕಾರಿ ಪದಗಳನ್ನು ಬಳಸಿ ಮಾತನಾಡಿದ್ದರು. ಆನಂತರ ಭಾಷಣದ ಆಡಿಯೋ, ವಿಡಿಯೋ ವೈರಲ್ ಆಗಿದ್ದವು.