2015ರಿಂದ 2018ರ ನಡುವೆ ನಡೆದ ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮತ್ತು ಬಹುಸಂಖ್ಯಾತ ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆಗಳು ನಡೆದಿದ್ದವು. ಕೊಡಗು, ದಕ್ಷಿಣ ಕನ್ನಡ, ಮಂಡ್ಯ, ಶಿವಮೊಗ್ಗ, ದಾವಣಗೆರೆ ಮೊದಲಾದ ಜಿಲ್ಲೆಗಳಲ್ಲಿ ಸಂಭವಿಸಿದ ಘರ್ಷಣೆಗಳಿಗೆ ಸಂಬಂಧಿಸಿದಂತೆ 120ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದ್ದವು.