ಈ ಕುರಿತಂತೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠವು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಜಲಮಂಡಳಿ ಹಾಗೂ ಅರ್ಜಿದಾರರಾದ ಸಿಟಿಜನ್ ಆ್ಯಕ್ಷನ್ ಗ್ರೂಪ್ಗೆ ಬುಧವಾರ ನಿರ್ದೇಶಿಸಿದೆ.
‘ರಾಜಕಾಲುವೆಗಳಿಗೆ ಕೊಳಚೆ ನೀರು ಹರಿಯುವುದನ್ನು ತಡೆಗಟ್ಟಲು ತಜ್ಞರ ಸಮಿತಿಯೊಂದನ್ನು ರಚಿಸುವ ಅಗತ್ಯವಿದೆ. ಆದ್ದರಿಂದ ಬಿಬಿಎಂಪಿ, ಜಲಮಂಡಳಿ ಹಾಗೂ ಅರ್ಜಿದಾರರು ಈ ಕುರಿತಂತೆ ಪರಸ್ಪರ ಚರ್ಚಿಸಬೇಕು. ಈ ವಿಷಯದಲ್ಲಿ ಜಾಗತಿಕ ಮಟ್ಟದಲ್ಲಿ ಅನುಭವ ಹೊಂದಿರುವ ತಜ್ಞರನ್ನು ಗುರುತಿಸಿ ಪಟ್ಟಿಯೊಂದನ್ನು ಸಿದ್ಧಪಡಿಸಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ನ್ಯಾಯಪೀಠ ಹೇಳಿತು.