<p><strong>ಉಪ್ಪಿನಂಗಡಿ</strong>:‘ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಅಂಡ್ ಚಾರಿಟಬಲ್ ಟ್ರಸ್ಟ್ ನಿಂದ ಮುಂದಿನ ದಿನಗಳಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡುವ ಯೋಜನೆ ಇದೆ’ ಎಂದು ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೇಳಿದರು.</p>.<p>ಪೆರ್ನೆಯ ಮೊಮ್ಮಾರಿಯ ಬಡ ಕುಟುಂಬವೊಂದಕ್ಕೆ ಟ್ರಸ್ಟ್ನ ಖರ್ಚಿನಲ್ಲಿ ಭೂ ಪರಿವರ್ತನೆ ಮಾಡಿ ಅದರ ದಾಖಲೆ ಪತ್ರ ಹಸ್ತಾಂತರಿಸಿದ ಬಳಿಕ ಮಾತನಾಡಿದ ಅವರು, ಟ್ರಸ್ಟ್ ವತಿಯಿಂದ ಐದು ಕಡೆಗಳಲ್ಲಿ ತಲಾ 5 ರಿಂದ 10 ಎಕರೆ ಜಾಗ ಖರೀದಿಸಿ, ಅದನ್ನು ನಾಲ್ಕು ಸೆಂಟ್ಸ್ನಂತೆ ನಿವೇಶನ ರಹಿತರಿಗೆ ಹಂಚಿ, ಅವರ ಹೆಸರಿನಲ್ಲಿ ಹಕ್ಕು ಪತ್ರ ಮಾಡಿಕೊಡಲಾಗುವುದು’ ಎಂದರು.</p>.<p>ಸರ್ಕಾರದ ವಸತಿ ಯೋಜನೆಯಡಿಯಲ್ಲಿ ನಿವೇಶನ ತೆಗಿಸಿಕೊಟ್ಟು, ಅದಕ್ಕೆ ಟ್ರಸ್ಟ್ನ ಹಣವನ್ನು ಸೇರಿಸಿ, ಅವರಿಗೆ ಉತ್ತಮವಾದ ಮನೆ ನಿರ್ಮಿಸಿಕೊಡಲಾಗುವುದು. ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 1 ಸಾವಿರ ಬಡ ನಿವೇಶನ ರಹಿತರಿಗೆ ಈ ಸೌಲಭ್ಯ ನೀಡಲು ಯೋಜನೆ ಹಾಕಿಕೊಳ್ಳಲಾಗಿದ್ದು, ಇಂತಹ ಲೇಔಟ್ಗಳಿಗೆ ಶುದ್ಧವಾದ ಕುಡಿಯುವ ನೀರಿನ ಸೌಲಭ್ಯ, ರಸ್ತೆ, ಶಾಲಾ ವ್ಯವಸ್ಥೆಯನ್ನು ಟ್ರಸ್ಟ್ ವತಿಯಿಂದಲೇ ಮಾಡಿಕೊಡಲಾಗುವುದು ಎಂದರು.</p>.<p>ಪೆರ್ನೆ-ಬಿಳಿಯೂರು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ ಗೌಡ, ಸ್ಥಳದಾನಿ ಗೋಪಾಲ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯ ನವೀನ್ ಮಾತನಾಡಿದರು. ಮಲ್ಲಡ್ಕ ಶಾಲೆಗೆ ಶಿಕ್ಷಕರ ಗೌರವಧನದ ಚೆಕ್ ಹಸ್ತಾಂತರಿಸಲಾಯಿತು.</p>.<p>ಪೆರ್ನೆ ಗ್ರಾಮ ಪಂಚಾಯಿತಿ ಸದಸ್ಯರಾದ ಯಶೋಧಾ, ಲಲಿತಾ, ಸುಮತಿ, ಹರಿಣಾಕ್ಷಿ, ಶಿವಪ್ಪ ನಾಯ್ಕ, ವೇಣುಗೋಪಾಲ ಶೆಟ್ಟಿ, ಬಿಜೆಪಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ಶರೂನ್ ನೊರೋನ್ಹಾ, ಬಿಜೆಪಿ ಮುಖಂಡರಾದ ಪುಷ್ಪರಾಜ ಶೆಟ್ಟಿ, ಸುರೇಂದ್ರ ನಾಯಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ</strong>:‘ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಅಂಡ್ ಚಾರಿಟಬಲ್ ಟ್ರಸ್ಟ್ ನಿಂದ ಮುಂದಿನ ದಿನಗಳಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡುವ ಯೋಜನೆ ಇದೆ’ ಎಂದು ಟ್ರಸ್ಟ್ ಪ್ರವರ್ತಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೇಳಿದರು.</p>.<p>ಪೆರ್ನೆಯ ಮೊಮ್ಮಾರಿಯ ಬಡ ಕುಟುಂಬವೊಂದಕ್ಕೆ ಟ್ರಸ್ಟ್ನ ಖರ್ಚಿನಲ್ಲಿ ಭೂ ಪರಿವರ್ತನೆ ಮಾಡಿ ಅದರ ದಾಖಲೆ ಪತ್ರ ಹಸ್ತಾಂತರಿಸಿದ ಬಳಿಕ ಮಾತನಾಡಿದ ಅವರು, ಟ್ರಸ್ಟ್ ವತಿಯಿಂದ ಐದು ಕಡೆಗಳಲ್ಲಿ ತಲಾ 5 ರಿಂದ 10 ಎಕರೆ ಜಾಗ ಖರೀದಿಸಿ, ಅದನ್ನು ನಾಲ್ಕು ಸೆಂಟ್ಸ್ನಂತೆ ನಿವೇಶನ ರಹಿತರಿಗೆ ಹಂಚಿ, ಅವರ ಹೆಸರಿನಲ್ಲಿ ಹಕ್ಕು ಪತ್ರ ಮಾಡಿಕೊಡಲಾಗುವುದು’ ಎಂದರು.</p>.<p>ಸರ್ಕಾರದ ವಸತಿ ಯೋಜನೆಯಡಿಯಲ್ಲಿ ನಿವೇಶನ ತೆಗಿಸಿಕೊಟ್ಟು, ಅದಕ್ಕೆ ಟ್ರಸ್ಟ್ನ ಹಣವನ್ನು ಸೇರಿಸಿ, ಅವರಿಗೆ ಉತ್ತಮವಾದ ಮನೆ ನಿರ್ಮಿಸಿಕೊಡಲಾಗುವುದು. ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 1 ಸಾವಿರ ಬಡ ನಿವೇಶನ ರಹಿತರಿಗೆ ಈ ಸೌಲಭ್ಯ ನೀಡಲು ಯೋಜನೆ ಹಾಕಿಕೊಳ್ಳಲಾಗಿದ್ದು, ಇಂತಹ ಲೇಔಟ್ಗಳಿಗೆ ಶುದ್ಧವಾದ ಕುಡಿಯುವ ನೀರಿನ ಸೌಲಭ್ಯ, ರಸ್ತೆ, ಶಾಲಾ ವ್ಯವಸ್ಥೆಯನ್ನು ಟ್ರಸ್ಟ್ ವತಿಯಿಂದಲೇ ಮಾಡಿಕೊಡಲಾಗುವುದು ಎಂದರು.</p>.<p>ಪೆರ್ನೆ-ಬಿಳಿಯೂರು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ ಗೌಡ, ಸ್ಥಳದಾನಿ ಗೋಪಾಲ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯ ನವೀನ್ ಮಾತನಾಡಿದರು. ಮಲ್ಲಡ್ಕ ಶಾಲೆಗೆ ಶಿಕ್ಷಕರ ಗೌರವಧನದ ಚೆಕ್ ಹಸ್ತಾಂತರಿಸಲಾಯಿತು.</p>.<p>ಪೆರ್ನೆ ಗ್ರಾಮ ಪಂಚಾಯಿತಿ ಸದಸ್ಯರಾದ ಯಶೋಧಾ, ಲಲಿತಾ, ಸುಮತಿ, ಹರಿಣಾಕ್ಷಿ, ಶಿವಪ್ಪ ನಾಯ್ಕ, ವೇಣುಗೋಪಾಲ ಶೆಟ್ಟಿ, ಬಿಜೆಪಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ಶರೂನ್ ನೊರೋನ್ಹಾ, ಬಿಜೆಪಿ ಮುಖಂಡರಾದ ಪುಷ್ಪರಾಜ ಶೆಟ್ಟಿ, ಸುರೇಂದ್ರ ನಾಯಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>