‘ಬಳ್ಳಾರಿ ಜಿಲ್ಲೆಯಲ್ಲಿ 135 ಬ್ಯಾಂಕ್ ರಿಕವರಿ, 578 ವಿದ್ಯುತ್, 31 ನೀರಿನ ವ್ಯಾಜ್ಯ ಪ್ರಕರಣಗಳು ಇತ್ಯರ್ಥವಾಗಿದ್ದು, 878 ಪ್ರಕರಣಗಳು ಬಾಕಿ ಉಳಿದಿವೆ. ಪ್ರತಿ ಎರಡು ತಿಂಗಳಿಗೊಮ್ಮೆ ಎರಡನೇ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುತ್ತದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಿ ಅರಿವು ಕಾರ್ಯಕ್ರಮ ಮೂಡಿಸಲಾಗುವುದು' ಎಂದರು. ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಸಂಧಾನದ ಮೂಲಕ 5 ಪ್ರಕರಣಗಳನ್ನು ಪರಿಶೀಲಿಸಿ ಇತ್ಯರ್ಥ ಮಾಡಲಾಯಿತು.