ಭಾಗಮಂಡಲದ ಭಗಂಡೇಶ್ವರ ದೇಗುಲದಿಂದ ಮೆರವಣಿಗೆಯಲ್ಲಿ ತರಲಾಗಿದ್ದ ಚಿನ್ನಾಭರಣದಲ್ಲಿ ಕಾವೇರಿ ಮಾತೆಯ ಕಂಗೊಳಿಸುತ್ತಿದ್ದಳು. ಗುರುವಾರ ಬೆಳಿಗ್ಗೆಯೇ ವಿಶೇಷ ಪೂಜೆ ನಡೆಸಿ, ಚಿನ್ನಾಭರಣ ಧಾರಣೆ ಮಾಡಲಾಗಿತ್ತು. ತೀರ್ಥೋದ್ಭವದೊಂದಿಗೆ ಕಾವೇರಿ ಜಾತ್ರೆ ಆರಂಭಗೊಂಡಿದ್ದು, ಭಾಗಮಂಡಲದಲ್ಲಿ ಒಂದು ತಿಂಗಳು ಸಂಭ್ರಮ ಇರಲಿದೆ.