ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, "ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಕ್ಷ್ಮಿ ಲೇ ಔಟ್ ಠಾಣೆ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ದೋಷಾರೋಪ ಪಟ್ಟಿ ಸಲ್ಲಿಸಿದ ನಂತರ 2019ರ ಜನವರಿ 24ರಂದು ನಗರ ಪೊಲೀಸ್ ಉಪ ಆಯುಕ್ತರು ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಆದೇಶಿಸಿದ್ದಾರೆ. ಅರ್ಜಿದಾರರು ತನಿಖೆಗೆ ಹಾಜರಾಗುವಂತೆ ಫೆ.5ರಂದು ನೋಟಿಸ್ ನೀಡಲಾಗಿದೆ. ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿರುವುದಕ್ಕೆ ಸೂಕ್ತ ಕಾರಣ ನೀಡಿಲ್ಲ" ಎಂದು ಆಕ್ಷೇಪಿಸಿದರು.