ಕಲಬುರ್ಗಿ: ‘ಸಿಬಿಐನಲ್ಲಿ ನಡೆದ ಭ್ರಷ್ಟಾಚಾರ ಬಹಿರಂಗಗೊಳ್ಳುತ್ತಲೇ ಪ್ರಧಾನಿ ಕಚೇರಿಯ ಹುಳುಕುಗಳು ಹೊರ ಬೀಳುತ್ತಿವೆ. ಸಿಬಿಐ ಕಚೇರಿಗೆ ಕೇಂದ್ರ ಸರ್ಕಾರ ಬೀಗ ಹಾಕಿದೆ. ಕೆಲವು ಅಧಿಕಾರಿಗಳನ್ನು ಬದಲು ಮಾಡಿದ್ದು, ಕೆಲವರನ್ನು ನಿರ್ಬಂಧಿತ ರಜೆಯಲ್ಲಿ ತೆರಳುವಂತೆ ಆದೇಶ ನೀಡಿದೆ. ಇದೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದರೆ ಭ್ರಷ್ಟಾಚಾರದಲ್ಲಿ ಪ್ರಧಾನಿ ಕಚೇರಿಗೂ ಮತ್ತು ಸಿಬಿಐ ಅಧಿಕಾರಿಗಳ ಮಧ್ಯೆ ಸಂಬಂಧವಿರುವಂತೆ ಕಂಡು ಬರುತ್ತಿದೆ’ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.