ಅನರ್ಹಗೊಂಡಿರುವ ಶಿವಾಜಿ ನಗರಶಾಸಕ ರೋಷನ್ ಬೇಗ್, ಚಾಮರಾಜ ಪೇಟೆಯ ಶಾಸಕ ಜಮೀರ್ ಅಹಮದ್, ಮಾಜಿ ಮುಖ್ಯಮಂತ್ರಿಯೊಬ್ಬರಿಗೆ ಆಪ್ತರಾದ ಪರಿಷತ್ನ ಕಾಂಗ್ರೆಸ್ ಸದಸ್ಯ, ಸಚಿವರಾಗಿದ್ದಾಗ ಜೈಲಿಗೆ ಹೋಗಿ ಬಂದ ಬಿಜೆಪಿ ನಾಯಕ, ಐ.ಟಿ, ಪೊಲೀಸ್, ಆರ್ಬಿಐ ಸೇರಿದಂತೆ ಅನೇಕ ಇಲಾಖೆಗಳ ಅಧಿಕಾರಿಗಳು ಐಎಂಎ ಮಾಲೀಕ ಮನ್ಸೂರ್ ಖಾನ್ ಅವರಿಂದ ‘ಅಕ್ರಮ ಲಾಭ’ ಪಡೆದಿರುವ ಆರೋಪಕ್ಕೆ ಒಳಗಾಗಿದ್ದಾರೆ. ಬಿಜೆಪಿ ಸರ್ಕಾರ ತನ್ನ ರಾಜ ಕೀಯ ಎದುರಾಳಿಗಳನ್ನು ಹಣಿ ಯಲು, ಹಿಂದಿನ ಮೈತ್ರಿ ಸರ್ಕಾರ ಉರುಳಿಸಲು ಕೈಜೋಡಿಸಿದ ರಾಜಕಾರಣಿಗಳನ್ನು ರಕ್ಷಿಸಲು ಸಿಬಿಐ ಅನ್ನು ಬಳಸಿಕೊಳ್ಳಬಹುದು ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಹೀಗಾಗಿ, ಸಿಬಿಐ ತನಿಖೆ ನಿಷ್ಪಕ್ಷಪಾತವಾಗಿ ನಡೆಯುವುದೇ ಎಂಬ ಪ್ರಶ್ನೆ ಎದ್ದಿದೆ.