ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಮಹಲ್‌ ಜ್ಯುವೆಲರ್ಸ್‌ ಮಾಲೀಕನ ಮನೆ ಮೇಲೆ ಸಿ.ಸಿ.ಬಿ. ದಾಳಿ

Last Updated 9 ನವೆಂಬರ್ 2018, 16:10 IST
ಅಕ್ಷರ ಗಾತ್ರ

ಬಳ್ಳಾರಿ: ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳ ಮೇಲೆ ಪ್ರಭಾವ ಬೀರಲು ಮಾಜಿಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಡೀಲ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿ.ಸಿ.ಬಿ. ಪೊಲೀಸರು ಶುಕ್ರವಾರ ರಾತ್ರಿ ನಗರದ ರಾಜಮಹಲ್‌ ಜ್ಯುವೆಲರ್ಸ್‌ ಮಾಲೀಕ ರಮೇಶ ಅವರ ಮನೆ ಮೇಲೆ ದಾಳಿ ನಡೆಸಿ, ಶೋಧ ನಡೆಸಿದರು.

ಇಲ್ಲಿನ ಕೋಟೆ ಪ್ರದೇಶದಲ್ಲಿರುವ ಮನೆ ಮೇಲೆ ಸಿ.ಸಿ.ಬಿ. ಎ.ಸಿ.ಪಿ. ಮಂಜುನಾಥ ಚೌಧರಿ ನೇತೃತ್ವದ ಅಧಿಕಾರಿಗಳ ತಂಡ ಸಂಜೆ ದಾಳಿ ನಡೆಸಿ ರಾತ್ರಿ 9.30ರ ವರೆಗೆ ಶೋಧ ಕಾರ್ಯ ಕೈಗೊಂಡರು. ಇದೇ ವೇಳೆ ರಮೇಶ ಅವರ ಕುಟುಂಬ ಸದಸ್ಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ವಾರದ ಹಿಂದೆ ರಮೇಶ ಅವರನ್ನು ಸಿ.ಸಿ.ಬಿ. ಪೊಲೀಸರು ಬಂಧಿಸಿ, ನಂತರ ಬಿಡುಗಡೆಗೊಳಿಸಿದ್ದಾರೆ. ಗುರುವಾರ ಜನಾರ್ದನ ರೆಡ್ಡಿ ಅವರ ನಿವಾಸ ಹಾಗೂ ಓಬಳಾಪುರಂ ಮೈನಿಂಗ್‌ ಕಚೇರಿ ಮೇಲೆ ಸಿ.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT