ಮುಂಜಾಗರೂಕತಾ ಕ್ರಮವಾಗಿ ರಾಜ್ಯದಲ್ಲಿ ಸಾಮೂಹಿಕ ಪ್ರಾರ್ಥನೆ, ಸಭೆಗಳಿಗೆ ನಿಷೇಧ ಹೇರಲಾಗಿದೆ. ಆದರೂ ನಿರ್ಬಂಧಗಳನ್ನು ಲೆಕ್ಕಿಸದೇ ಕೆಲವು ಕಡೆ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಹೀಗಾಗಿ ಯಾವುದೇ ಧರ್ಮದವರಾದರೂ ಸರಿ ಸಾಮೂಹಿಕ ಪ್ರಾರ್ಥನೆ ನಡೆಸದಂತೆ ಸಂಬಂಧಿಸಿದವರಿಗೆ ನೋಟಿಸ್ ಕೊಡಿ, ಅದಕ್ಕೆ ಮನ್ನಣೆ ನೀಡದಿದ್ದರೆ ಕಾನೂನು ಕ್ರಮ ಜರುಗಿಸಿ ಎಂದು ಆಯಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.