‘ನಿಖರ ಕೃಷಿ’ ತಂತ್ರಜ್ಞಾನದ ಪ್ರಾಯೋಗಿಕ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರದ ಜತೆ ಮಾತುಕತೆ ನಡೆಯುತ್ತಿದೆ. ಇದರಲ್ಲಿ ರೈತರು ತಮ್ಮ ಮಣ್ಣು, ಬೆಳೆ ಮತ್ತು ಅದರ ಬೆಳವಣಿಗೆಯ ಗುಣಲಕ್ಷಣಗಳನ್ನು ಮೊಬೈಲ್ ತಂತ್ರಾಂಶಕ್ಕೆ ಹಾಕಿ ಏನು ಮಾಡಬೇಕು ಎನ್ನುವುದರ ಕರಾರುವಾಕ್ಕು ಮಾಹಿತಿ ಪಡೆಯಬಹುದು. ಇದಕ್ಕಾಗಿ ಅಗ್ಗದ ದರದ ಸೆನ್ಸರ್ಗಳೂ ಇದ್ದು, ಅದನ್ನು ಅಲ್ಲಲ್ಲಿ ಅಳವಡಿಸಲಾಗುವುದು ಎಂದು ಮಾಹಿತಿ ನೀಡಿದರು.