‘ಮಹದಾಯಿ ಕುರಿತಂತೆ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಬರೆದಿರುವ ಪತ್ರವು ಹಾಸ್ಯಾಸ್ಪದ ಮತ್ತು ಗೊಂದಲಮಯವಾಗಿದೆ. ಕುಡಿಯುವ ನೀರಿನ ಯೋಜನೆಗಳಿಗೆ ಪರಿಸರ ಇಲಾಖೆಯ ಅನುಮತಿ ಇಲ್ಲ ಒಂದೆಡೆ ಹೇಳಿದರೇ, ಮತ್ತೊಂದೆಡೆ ನಾಯಮಂಡಳಿಯ ತೀರ್ಪಿನ ಅಧಿಸೂಚನೆ ಹೊರಡಿಸಿದ ನಂತರ ಅಗತ್ಯ ಅನುಮತಿ ಪಡೆದು ಕಾಮಗಾರಿ ಆರಂಭಿಸಬಹುದು ಎಂದು ಹೇಳುವ ಮೂಲಕ ಸಚಿವರು ಬಾಲಿಶತನ ಮೆರೆದಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.