ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಂದೆಡೆ ಮುಸ್ಲಿಂ ಮಹಿಳಾ ಸಬಲೀಕರಣದ ಕುರಿತು ಮಾತನಾಡುವ ಕಾಂಗ್ರೆಸ್ ಮುಖಂಡರು, ಇನ್ನೊಂದೆಡೆ ತ್ರಿವಳಿ ತಲಾಖ್ ಮಸೂದೆಗೆ ವಿರೋಧ ವ್ಯಕ್ತಪಡಿಸುವ ಮೂಲಕ ಗೊಂದಲದಲ್ಲಿದ್ದಾರೆ. ಕಾಂಗ್ರೆಸ್ ಬೌದ್ಧಿಕವಾಗಿ ದಿವಾಳಿಯಾಗಿರುವುದರ ಸಂಕೇತ ಇದಾಗಿದೆ' ಎಂದು ಅವರು ಟೀಕಿಸಿದರು.