‘ಇಲ್ಲಿಯವರೆಗೆ ರಾಜ್ಯ ಸರ್ಕಾರ ಉತ್ತಮ ರೀತಿಯಲ್ಲೇ ಕೋವಿಡ್ ಪರಿಸ್ಥಿತಿಯನ್ನು ನಿರ್ವಹಿಸಿದೆ. ಆದರೆ, ಮುಂದಿನ ದಿನಗಳು ಅತ್ಯಂತ ಮಹತ್ವದ್ದಾಗಿವೆ. ಕೋವಿಡ್ನಿಂದ ಉಂಟಾಗುವ ಮರಣವನ್ನು ತಡೆಗಟ್ಟಲು ಮತ್ತು ರೋಗ ಲಕ್ಷಣ ಇರುವ ಸೋಂಕಿತರಿಗೆ ಸೂಕ್ತ ಚಿಕಿತ್ಸಾ ಸೌಲಭ್ಯ ಒದಗಿಸಲು ಆದ್ಯತೆ ನೀಡಬೇಕಾಗಿದೆ’ ಎಂದು ಕೇಂದ್ರ ತಂಡ ಸೂಚಿಸಿದೆ.