ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಕೇಂದ್ರಗಳಿಗೆ ಹಾಜರಾಗಬೇಕು. ಸಾಮಾನ್ಯ ವರ್ಗ, ಮೀಸಲಾತಿ ಪ್ರವರ್ಗಗಳು ಹಾಗೂ ವಿಶೇಷ ಪ್ರವರ್ಗದ ವಿದ್ಯಾರ್ಥಿಗಳು ದಾಖಲಾತಿ ಪರಿಶೀಲನೆಗೆ ತಮ್ಮ ಸ್ವಂತ ಜಿಲ್ಲೆಯಲ್ಲಿ ಅಥವಾ ತಾವು ದ್ವಿತೀಯ ಪಿಯು ವ್ಯಾಸಂಗ ಮಾಡಿದ ಜಿಲ್ಲೆಯ ಸಹಾಯ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಕೆಇಎ ಪ್ರಕಟಣೆ ತಿಳಿಸಿದೆ.