‘ನಾವು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರಲಿಲ್ಲ. ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೆವು. ಆದರೆ, ಕಾಂಗ್ರೆಸ್ ಪಕ್ಷ ನಮ್ಮನ್ನು ಪಕ್ಷದಿಂದ ಅಮಾನತುಗೊಳಿಸಿದೆ. ನನ್ನ ಜೊತೆಗಿರುವ ಮುಂಡಗೋಡ, ಯಲ್ಲಾಪುರ ಬ್ಲಾಕ್ ಅಧ್ಯಕ್ಷರನ್ನು ಸಹ ವಜಾಗೊಳಿಸಲಾಗಿದೆ. ಇನ್ನು ಕಾಂಗ್ರೆಸ್ ವಜಾಗೊಳಿಸಲು ಅವಕಾಶ ಕೊಡುವುದಿಲ್ಲ. ನನ್ನ ಬೆಂಬಲಿಗರೇ ಪಕ್ಷಕ್ಕೆ ರಾಜೀನಾಮೆ ನೀಡುತ್ತಾರೆ’ ಎಂದ ಹೆಬ್ಬಾರ್, ‘ಬಿಜೆಪಿಗರು ನನ್ನ ಮೇಲೆ ಇಟ್ಟ ಅಭಿಮಾನಕ್ಕೆ ಕೃತಜ್ಞ. ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ಬೆಂಬಲಿಗರೊಂದಿಗೆ ಚರ್ಚಿಸಿ, ಅಂತಿಮ ಕೈಗೊಳ್ಳುತ್ತೇನೆ ಎಂದರು.