ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರು ಸ್ವಾಭಿಮಾನಿ ಸಮಾವೇಶ ನಡೆಸುತ್ತಿದ್ದ ಸಮಯದಲ್ಲೇ ಇಲ್ಲಿನ ಹೋಟೆಲ್ನಲ್ಲಿ ಇಬ್ಬರು ಅರ್ಧ ಗಂಟೆ ಚರ್ಚೆ ನಡೆಸಿದ್ದು ಮಹತ್ವ ಪಡೆದುಕೊಂಡಿದೆ. ಸುಮಲತಾಗೆ ಪರೋಕ್ಷ ಬೆಂಬಲ ನೀಡಿದ್ದು, ಮಂಡ್ಯದ ಸ್ವಾಭಿಮಾನಿ ಸಮಾವೇಶದ ಯಶಸ್ಸಿನ ಬಗ್ಗೆ ಈ ಇಬ್ಬರೂ ಮುಖಂಡರು ತಮ್ಮ ಆಪ್ತರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ಪಡೆಯುತ್ತಿದ್ದರು.