ಅದಲು ಬದಲು– ಆಡಳಿತ ಪಕ್ಷದ ಸಾಲಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಕದಲ್ಲಿ ಗೋವಿಂದ ಕಾರಜೋಳ, ಉಮೇಶ ಕತ್ತಿ, ವಿ.ಸೋಮಣ್ಣ, ಜಗದೀಶ ಶೆಟ್ಟರ್, ಆರ್.ಅಶೋಕ್, ಕೆ.ಎಸ್.ಈಶ್ವರಪ್ಪ, ಸಿ.ಎಂ. ಉದಾಸಿ, ಕೆ.ಜಿ.ಬೋಪಯ್ಯ ಅವರಿಗೆ ಸ್ಥಾನ ನಿಗದಿಪಡಿಸಲಾಗಿದೆ. ಸಚಿವ ಸಂಪುಟ ವಿಸ್ತರಣೆಯಾದ ಬಳಿಕ, ಮೊದಲ ಮೂರು ಸಾಲನ್ನು ಸಚಿವರಿಗೆ ಮೀಸಲಿಡಲಾಗುತ್ತದೆ.ವಿರೋಧ ಪಕ್ಷದ ಸಾಲಿನಲ್ಲಿ ಸಿದ್ದರಾಮಯ್ಯ ಪಕ್ಕದಲ್ಲಿ ಆರ್.ವಿ.ದೇಶಪಾಂಡೆ, ರಾಮಲಿಂಗಾ ರೆಡ್ಡಿ, ಡಿ.ಕೆ.ಶಿವಕುಮಾರ್ ಅವರಿಗೆ ಸೀಟು ನೀಡಲಾಗಿದೆ. ನಂತರದ ಆಸನನಗಳು ಜೆಡಿಎಸ್ ಶಾಸಕರಾದ ಎಚ್.ಡಿ.ಕುಮಾರಸ್ವಾಮಿ, ಎಚ್.ಕೆ.ಕುಮಾರಸ್ವಾಮಿ ಅವರಿಗೆ ನಿಗದಿಯಾಗಿದೆ.