ಮುಖ್ಯಮಂತ್ರಿ ಪ್ರವಾಸದ ಸಮಯದಲ್ಲಿ ಜಿಲ್ಲಾ ಕೇಂದ್ರದ ಗಡಿಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ವಾಗತ ಕೋರಿ, ಪೊಲೀಸರಿಂದ ಗೌರವ ರಕ್ಷೆ ನೀಡಲಾಗುತ್ತದೆ. ಇದೇ ರೀತಿಯ ಶಿಷ್ಟಾಚಾರವನ್ನು ಉಪಮುಖ್ಯಮಂತ್ರಿಗಳಿಗೂ ಪಾಲನೆ ಮಾಡಬೇಕಿತ್ತು. ಆದರೆ ಈಗಿನ ಸರ್ಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳು ಇದ್ದು, ಆಗಾಗ ಪ್ರವಾಸ ಹೋಗುತ್ತಿರುತ್ತಾರೆ. ಇಂತಹ ಸಮಯದಲ್ಲಿ ಪ್ರತಿ ಸಲವೂ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸ್ವಾಗತ ಕೋರುವುದು ಕಷ್ಟ. ಹಾಗಾಗಿ ಜಿಲ್ಲಾ ಗಡಿಗೆ ಹೋಗಿ ಸ್ವಾಗತ ಕೋರುವುದರಿಂದ ವಿನಾಯಿತಿ ನೀಡಲಾಗಿದೆ.