ಅಣ್ಣಪ್ಪಸ್ವಾಮಿ ದೇವಾಲಯದ ಸಮೀಪದಲ್ಲಿರುವ ಅರಣ್ಯದ ತಪ್ಪಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಂಗಳವಾರ ತಡರಾತ್ರಿ ಬೆಂಕಿಯ ಜ್ವಾಲೆ ಬಹುದೂರದವರೆಗೂ ಕಾಣುತ್ತಿತ್ತು. ಕಾಳ್ಗಿಚ್ಚಿನಿಂದಾಗಿ ಹುಲ್ಲುಗಾವಲು ಬೆಂಕಿಗೆ ಆಹುತಿಯಾಗುವುದರಿಂದ ಹುಲ್ಲಿನ ಪೊದೆಗಳಲ್ಲಿ ಗೂಡು ಕಟ್ಟಿರುವ ಪಕ್ಷಿಗಳು, ಪೊದೆಗಳ ನಡುವೆ ಇರುವ ಕಾಡುಕುರಿ, ಮೊಲದ ಮರಿಗಳು, ಚಿಟ್ಟೆ ಮತ್ತಿತರ ಕೀಟಗಳು ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗುವ ಅಪಾಯವಿದೆ.