<p><strong>ಸಿದ್ದಾಪುರ:</strong> ಕೋವಿಡ್ 19 ಭೀತಿಯಿಂದ ಸಿದ್ದಾಪುರ ಪಟ್ಟಣದಲ್ಲಿ ಜನಸಂಖ್ಯೆ ವಿರಳವಾಗಿದ್ದು, ಮಾಂಸ, ಮೀನು ಸೇರಿದಂತೆ ಅಂಗಡಿಗಳಲ್ಲಿ ಗ್ರಾಹಕರು ಕುಂಠಿತಗೊಂಡಿದೆ.</p>.<p>ಈಗಾಗಲೇ ಜಿಲ್ಲಾದ್ಯಂತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಸಿದ್ದಾಪುರ ಹಾಗೂ ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ 14 ದಿನಗಳ ಒಳಗೆ ವಿದೇಶದಿಂದ ಬಂದವರ ಮಾಹಿತಿಯನ್ನು ಗ್ರಾ.ಪಂ ವತಿಯಿಂದ ಸಂಗ್ರಹಿಸಲಾಗಿದೆ. ನೆಲ್ಯಹುದಿಕೇರಿ ಪಿ.ಡಿ.ಒ ಅನಿಲ್ ಕುಮಾರ್ ಹಾಗೂ ಸಿದ್ದಾಪುರ ಪಿ.ಡಿ.ಓ ವಿಶ್ವನಾಥ್ ಗ್ರಾಮಕ್ಕೆ ಇತ್ತೀಚೆಗೆ ವಿದೇಶದಿಂದ ಬಂದವರ ಮಾಹಿತಿ ಕಲೆ ಹಾಕಿ, ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಪಡಲು ಮನವಿ ಮಾಡಿದರು.</p>.<p>ಪಟ್ಟಣದಲ್ಲಿ ಜನಸಂಖ್ಯೆ ವಿರಳವಾಗಿದ್ದು, ಹೊರರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಬರುವ ಬಸ್ಸ್ಗಳಲ್ಲಿ ಪ್ರಯಾಣಿಕ ಸಂಖ್ಯೆ ಕಡಿಮೆಯಾಗಿದೆ. ಸಿದ್ದಾಪುರ ವ್ಯಾಪ್ತಿಯಲ್ಲಿ ಹೆಚ್ಚು ಹೋಮ್ಸ್ಟೇ ಹಾಗೂ ರೆಸಾರ್ಟ್ಗಳು ಇದ್ದು, ಗ್ರಾಹಕರಿಲ್ಲದೇ ಬಿಕೋ ಎನ್ನುತ್ತಿದೆ. ವಿವಿಧ ದೇವಸ್ಥಾನಗಳಲ್ಲಿ ಉತ್ಸವಗಳು ಆರಂಭವಾಗಲಿದ್ದು, ಕೊರೊನಾ ವೈರಸ್ ಭೀತಿಯಿಂದ ಉತ್ಸವಗಳು ಕೂಡ ಮುಂದೂಡುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ಕೋವಿಡ್ 19 ಭೀತಿಯಿಂದ ಸಿದ್ದಾಪುರ ಪಟ್ಟಣದಲ್ಲಿ ಜನಸಂಖ್ಯೆ ವಿರಳವಾಗಿದ್ದು, ಮಾಂಸ, ಮೀನು ಸೇರಿದಂತೆ ಅಂಗಡಿಗಳಲ್ಲಿ ಗ್ರಾಹಕರು ಕುಂಠಿತಗೊಂಡಿದೆ.</p>.<p>ಈಗಾಗಲೇ ಜಿಲ್ಲಾದ್ಯಂತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಸಿದ್ದಾಪುರ ಹಾಗೂ ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ 14 ದಿನಗಳ ಒಳಗೆ ವಿದೇಶದಿಂದ ಬಂದವರ ಮಾಹಿತಿಯನ್ನು ಗ್ರಾ.ಪಂ ವತಿಯಿಂದ ಸಂಗ್ರಹಿಸಲಾಗಿದೆ. ನೆಲ್ಯಹುದಿಕೇರಿ ಪಿ.ಡಿ.ಒ ಅನಿಲ್ ಕುಮಾರ್ ಹಾಗೂ ಸಿದ್ದಾಪುರ ಪಿ.ಡಿ.ಓ ವಿಶ್ವನಾಥ್ ಗ್ರಾಮಕ್ಕೆ ಇತ್ತೀಚೆಗೆ ವಿದೇಶದಿಂದ ಬಂದವರ ಮಾಹಿತಿ ಕಲೆ ಹಾಕಿ, ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಪಡಲು ಮನವಿ ಮಾಡಿದರು.</p>.<p>ಪಟ್ಟಣದಲ್ಲಿ ಜನಸಂಖ್ಯೆ ವಿರಳವಾಗಿದ್ದು, ಹೊರರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಬರುವ ಬಸ್ಸ್ಗಳಲ್ಲಿ ಪ್ರಯಾಣಿಕ ಸಂಖ್ಯೆ ಕಡಿಮೆಯಾಗಿದೆ. ಸಿದ್ದಾಪುರ ವ್ಯಾಪ್ತಿಯಲ್ಲಿ ಹೆಚ್ಚು ಹೋಮ್ಸ್ಟೇ ಹಾಗೂ ರೆಸಾರ್ಟ್ಗಳು ಇದ್ದು, ಗ್ರಾಹಕರಿಲ್ಲದೇ ಬಿಕೋ ಎನ್ನುತ್ತಿದೆ. ವಿವಿಧ ದೇವಸ್ಥಾನಗಳಲ್ಲಿ ಉತ್ಸವಗಳು ಆರಂಭವಾಗಲಿದ್ದು, ಕೊರೊನಾ ವೈರಸ್ ಭೀತಿಯಿಂದ ಉತ್ಸವಗಳು ಕೂಡ ಮುಂದೂಡುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>