ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕುಮಾರಸ್ವಾಮಿ ವರ್ತನೆ ಬದಲಿಸಿಕೊಳ್ಳಲಿ’

ಮೈತ್ರಿ ಮಂಡ್ಯದಲ್ಲಷ್ಟೇ ಅಲ್ಲ; ರಾಜ್ಯದಲ್ಲೂ ಸಾಧ್ಯವಿಲ್ಲ
Last Updated 9 ಮೇ 2019, 18:14 IST
ಅಕ್ಷರ ಗಾತ್ರ

ಮಂಡ್ಯ: ‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೊದಲು ತಮ್ಮ ವರ್ತನೆ ಬದಲಿಸಿಕೊಳ್ಳಲಿ. ನಂತರ, ಕಾಂಗ್ರೆಸ್ ನಾಯಕರು ಯಾವ ರೀತಿ ಇರಬೇಕು ಎಂಬ ಕುರಿತು ಉಪದೇಶ ನೀಡಲಿ’ ಎಂದು ಕಾಂಗ್ರೆಸ್‌ ಮುಖಂಡ ಎನ್.ಚಲುವರಾಯಸ್ವಾಮಿ ಹರಿಹಾಯ್ದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ‘ಕೇವಲ 37 ಶಾಸಕರನ್ನು ಹೊಂದಿರುವ ಎಚ್.ಡಿ.ಕುಮಾರಸ್ವಾಮಿ, 80 ಸ್ಥಾನ ಗೆದ್ದಿರುವ ರಾಷ್ಟ್ರೀಯ ಪಕ್ಷದ ನಾಯಕರಿಗೆ ಸೂಚನೆ ನೀಡುತ್ತಾರೆ! ಮೈತ್ರಿ ಸರ್ಕಾರದಲ್ಲಿ ಯಾವತ್ತೂ ಇಂತಹ ನಡವಳಿಕೆ ನೋಡಿಲ್ಲ. ಜೆಡಿಎಸ್ ಮತ್ತು ಕಾಂಗ್ರೆಸ್, ಮಂಡ್ಯದಲ್ಲಿ ಮಾತ್ರವಲ್ಲ ರಾಜ್ಯದಲ್ಲೂ ಒಂದಾಗಲು ಸಾಧ್ಯವಿಲ್ಲ’ ಎಂದರು.

ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡ ಮಾತನಾಡಿ, ‘ಈ ಹಿಂದೆ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುವ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ. ಜಾತ್ಯತೀತ ನಾಯಕರಾಗಿ ಹಲವು ಯೋಜನೆಗಳ ಮೂಲಕ ಜನರ ಮನದಲ್ಲಿದ್ದಾರೆ. ಹೀಗಾಗಿ, ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT