ಕೆ.ಎಸ್.ನರಸಿಂಹಸ್ವಾಮಿ ಕಾವ್ಯಗಾಯನ ಪ್ರಶಸ್ತಿಗೆ ಅನುರಾಧಾ ಧಾರೇಶ್ವರ್ ಆಯ್ಕೆಯಾಗಿದ್ದಾರೆ.ಪ್ರಶಸ್ತಿಯು ತಲಾ ₹25,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನ.25 ರಂದು ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಿರಿಯ ಸಂಶೋಧಕ ಷ.ಶಟ್ಟರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.