ಇದನ್ನು ಆಕ್ಷೇಪಿಸಿದ ಸಿಬಿಐ ಪರ ವಕೀಲರು, "ಎರವಲು ಸೇವೆ ಮೇಲೆ ಕೃಷ್ಣ ಅವರು ಸಿಬಿಐಗೆ ಬಂದು ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವಾವಧಿ ಇದೇ 17ಕ್ಕೆ ಮುಗಿಯುತ್ತದೆ. ಅವರು ಉತ್ತಮ ಅಧಿಕಾರಿಯಾಗಿದ್ದಾರೆ. ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದೆ" ಎಂದು ಹೈಕೋರ್ಟ್ ಗೆ ತಿಳಿಸಿದರು.