ಲಾಕ್ಡೌನ್ನಿಂದಾಗಿ ಅತಂತ್ರ ಸ್ಥಿತಿಯಲ್ಲಿರುವ ಪ್ರಯಾಣಿಕರು ತಮ್ಮ ಊರುಗಳಿಗೆ ತಲುಪಲು ಅವಕಾಶ ನೀಡಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿತ್ತು. ಈ ಆದೇಶದನ್ವಯರಾಜ್ಯದಲ್ಲಿಯೂ ಹೊರಜಿಲ್ಲೆಗಳಿಗೆ ಪ್ರಯಾಣಿಕರು ತೆರಳಲು ನಿಯಮಿತ ಬಸ್ಸುಗಳಿಗೆ ಅವಕಾಶ ನೀಡಲಾಗಿತ್ತು. ದುಬಾರಿ ಟಿಕೆಟ್ ದರ ನೀಡಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಕಾರ್ಮಿಕರ ಬಳಿ ಹಣ ಇಲ್ಲದೆ, ಕೆಲ ಪ್ರಯಾಣಿಕರು ಮೆಜೆಸ್ಟಿಕ್ನಲ್ಲಿಯೇ ಕಾಲ ಕಳೆಯುವಂತಾಗಿತ್ತು.ಇದು ಮಾಧ್ಯಮದಲ್ಲಿಯೂ ಸುದ್ದಿಯಾಗಿತ್ತು.