ಫಾರಂ.: 50, 53, 57, 94(ಸಿ), 94 (ಸಿಸಿ) ಹಾಗೂ ಅರಣ್ಯ ಕಾಯ್ದೆ ಅಡಿ ಅರ್ಜಿ ಹಾಕಿರುವ ಎಲ್ಲಾ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಸಂಬಂಧಿತ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಬೇಕು. ಸರ್ಕಾರಿ ಭೂಮಿ ಅಥವಾ ಖಾಸಗೀ ಕೃಷಿ ಭೂಮಿಯನ್ನು ಬಂಡವಾಳಶಾಹಿಗಳಿಗೆ ಗೇಣಿ ನೀಡುವುದನ್ನು ನಿಲ್ಲಿಸಬೇಕು. ಸರ್ಕಾರಿ ಜಾಗದಲ್ಲಿ ನೆಲೆ ನಿಂತಿರುವ ನಿರಾಶ್ರಿತರಿಗೆ ಸರ್ವೇ ಕಾರ್ಯ ನಡೆಸಿ ಅದೇ ಜಾಗವನ್ನು ಹಂಚಿಕೆ ಮಾಡಬೇಕು ಎಂದು ನಿಯೋಗ ಮುಖ್ಯಮಂತ್ರಿ ಗಮನ ಸೆಳೆದಿದೆ.