ನಿಮ್ಮೆಲ್ಲರ ಸಹಕಾರದಿಂದ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಶೀಘ್ರದಲ್ಲಿಯೇ ಆರ್ಥಿಕ ಚಟುವಟಿಕೆಗಳು ಮತ್ತೆ ಪ್ರಾರಂಭವಾಗುವ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ವಾಣಿಜ್ಯೋದ್ಯಮಿಗಳೊಂದಿಗೆ ಸಭೆ ನಡೆಸಿದ್ದು, ಕಾರ್ಮಿಕರ ಹಿತ ಕಾಯುವ ಹಾಗೂ ವೇತನ ಪಾವತಿ ಮಾಡುವಂತೆ ಮನವಿ ಮಾಡಿದೆ. ಆದ್ದರಿಂದ ವಲಸೆ ಕಾರ್ಮಿಕರು ಆತಂಕಕ್ಕೆ ಒಳಗಾಗದೆ ಕೇಂದ್ರ ಸರ್ಕಾರದ ಸೂಚನೆ ಬಂದೊಡನೆ ಕೈಗಾರಿಕೆ ಹಾಗೂ ವಾಣಿಜ್ಯ ಚಟುವಟಿಕೆ ಪುನರಾರಂಭ ಮಾಡಲು ಸಹಕರಿಸುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.