ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ‘ಮುಖ್ಯಮಂತ್ರಿ ಜಿಲ್ಲಾ ಪ್ರವಾಸದ ಬಗ್ಗೆ ಮಾಹಿತಿ ಬಂದಿಲ್ಲ. ಅಥಣಿ, ಚಿಕ್ಕೋಡಿ, ರಾಯಬಾಗ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಅವರು ಹೆಲಿಕಾಪ್ಟರ್ನಲ್ಲಿ ವೀಕ್ಷಿಸುವುದೂ ಸಾಧ್ಯವಾಗುತ್ತಿಲ್ಲ. ನಾಳೆವರೆಗೆ ಹವಾಮಾನ ಸಹಕರಿಸಿದರೆ ಅಥಣಿ ಭಾಗದಲ್ಲಿ ವೀಕ್ಷಣೆ ನಡೆಸಬಹುದು’ ಎಂದು ತಿಳಿಸಿದರು.