ಚಿಕ್ಕಬಳ್ಳಾಪುರ: ಗೌರಿಬಿದನೂರು ಹತ್ತಿರದ ಬೀರಮಂಗಲದ ಚೆಕ್ಪೋಸ್ಟ್ನಲ್ಲಿ ಭಾನುವಾರ ಸಂಜೆ ಮಾದರಿ ನೀತಿ ಸಂಹಿತೆ ತಂಡದ ಅಧಿಕಾರಿಗಳು ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹40 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.
ಮಾರುತಿ ಶಿಫ್ಟ್ ಡಿಸೈರ್ ಕಾರಿನಲ್ಲಿ ಸಾಗಿಸುತ್ತಿದ್ದ ಹಣ ಲೋಟಸ್ ಕಂಪನಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ವಶಪಡಿಸಿಕೊಂಡಿರುವ ಹಣವನ್ನು ಚುನಾವಣಾ ನಗದು ಮುಟ್ಟುಗೋಲು ಪರಿಹಾರ ಸಮಿತಿಯು ಜಿಲ್ಲಾ ಖಜಾನೆಗೆ ಒಪ್ಪಿಸಿದೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಿಚಾರಣೆ ಬಳಿಕವಷ್ಟೇ ಹಣದ ನಿಖರ ಮೂಲ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದರು.