ನಗರದಲ್ಲಿ ಸೋಮವಾರ ನಾಮಪತ್ರ ಸಲ್ಲಿಕೆಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯವರು ಲೋಕಸಭೆ ಚುನಾವಣೆ ಮುಂಚೆಯೇ ಸಮ್ಮಿಶ್ರ ಸರ್ಕಾರ ಉರುಳಿಸಬೇಕು ಎಂದು ಪ್ರಯತ್ನಪಟ್ಟರು. ಆದರೆ ಅದು ಕೈಗೂಡಲಿಲ್ಲ. ಇದೀಗ ಈ ಚುನಾವಣೆಯಲ್ಲಿ 22 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಘಂಟಾಘೋಷವಾಗಿ ಹೇಳುತ್ತಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಸಮ್ಮಿಶ್ರ ಸರ್ಕಾರ ಬೀಳಿಸುವುದಾಗಿ ಹೇಳುತ್ತಿದ್ದಾರೆ. ಆದ್ದರಿಂದ, ಪ್ರತಿಯೊಬ್ಬರೂ ಜಾತ್ಯತೀತ ಪಕ್ಷಕ್ಕೆ ಮತ ನೀಡಬೇಕು’ ಎಂದು ತಿಳಿಸಿದರು.