ಜಿಲ್ಲೆಯ ಜನರ ಹಿತದೃಷ್ಟಿಯಿಂದ ಏ.15ರವರೆಗೆ ಇಲ್ಲಿನ ಪ್ರವಾಸಿ ತಾಣಗಳ (ಮುಳ್ಳಯ್ಯನಗಿರಿ, ಬಾಬಾಬುಡನ್ಗಿರಿ, ಕೆಮ್ಮಣ್ಣುಗುಂಡಿ, ಶೃಂಗೇರಿ...) ದರ್ಶನಕ್ಕೆ ಪ್ರವಾಸಿಗರು ಬರಬಾರದು ಎಂಬುದು ನಮ್ಮ ಕೋರಿಕೆ. ಸಮುದಾಯಕ್ಕೆ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಈ ಸಲಹೆಯನ್ನು ಪರಿಗಣಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.