ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಾವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡ ಎಚ್.ಡಿ.ಕೆ ದಂಪತಿ

Last Updated 15 ಮೇ 2018, 19:13 IST
ಅಕ್ಷರ ಗಾತ್ರ

ನಾಗಮಂಗಲ: ಎಲ್ಲರೂ ವಿಧಾನಸಭಾ ಚುನಾವಣೆಯ ಫಲಿತಾಂಶದತ್ತ ದೃಷ್ಟಿ ನೆಟ್ಟಿದ್ದರೆ, ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಕಾಲಭೈರವೇಶ್ವರ ದೇವರಿಗೆ ಅಮಾವಾಸ್ಯೆ ಪೂಜೆ ಸಲ್ಲಿಸುವುದರಲ್ಲಿ ನಿರತರಾಗಿದ್ದರು.

ಗೋ ಪೂಜೆಯಲ್ಲೂ ಪಾಲ್ಗೊಂಡ ಅವರು ದೇವಸ್ಥಾನದ ಮುಂಭಾಗದಲ್ಲಿರುವ ಯಾಗ ಮಂಟಪದಲ್ಲಿ ಏರ್ಪಾಡು ಮಾಡಿದ್ದ ಹೋಮದಲ್ಲಿ ಪತ್ನಿ ಅನಿತಾ ಜತೆ ಪಾಲ್ಗೊಂಡರು. ನಂತರ ಆದಿಚುಂಚನಗಿರಿಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಜೆಡಿಎಸ್ ಅಭ್ಯರ್ಥಿ ಸುರೇಶ್ ಗೌಡ ಈ ಸಂದರ್ಭದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT