ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಭಟ್ ಮಾತನಾಡಿ, ‘ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದಷ್ಟೇ ನಮ್ಮ ಕೆಲಸವಲ್ಲ. ಅವುಗಳನ್ನು ತಿಳಿದುಕೊಳ್ಳುವ ಜತೆಗೆ, ಅನುಭವಿಸುವುದೂ ಮುಖ್ಯ. ಆಗ ಮಾತ್ರ ವಿ.ಪಿ. ಬಳಿಗಾರ ಅವರ ಈ ಕನಸು ನನಸಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣಾಧಿಕಾರಿಗಳು, ಎಸ್ಡಿಎಂಸಿ ಸದಸ್ಯರು, ಪಾಲಕರು ಸಮ್ಮಿಳಿತವಾಗಿ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.