ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಎರಡು ತಿಂಗಳ ಹಿಂದೆ ಸಭೆ ನಡೆಸಿ, ಮಕ್ಕಳ ಸುರಕ್ಷತೆ ಬಗ್ಗೆ ಶಿಫಾರಸು ಮಾಡಲುಇಲಾಖೆಯ ಅಧಿಕಾರಿಗಳಲ್ಲದೆ, ಪೊಲೀಸ್, ಆರೋಗ್ಯ, ನಿಮ್ಹಾನ್ಸ್ ತಜ್ಞರ ಸಮಿತಿ ರಚಿಸಿದ್ದರು. ಈ ಸಮಿತಿ ನೀಡಿದ ವರದಿ ಆಧರಿಸಿ ಮಕ್ಕಳ ಸುರಕ್ಷತೆಗೆ ಈ ಮಾರ್ಗಸೂಚಿ ಹೊರಡಿಸಲಾಗಿದೆ. ಪೋಕ್ಸೊದಂತಹ ಪ್ರಕರಣಗಳು ಬೆಳಕಿಗೆ ಬಂದರೆ, ದೂರುಗಳು ಬಾರದೆ ಇದ್ದರೂ, ಪೊಲೀಸರು ಸ್ವಯಂಪ್ರೇರಣೆಯಿಂದ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಲಾಗಿದೆ.