ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ತಾಸು ಪೊಲೀಸರ ವಶದಲ್ಲಿದ್ದ ಚಿಂಚನಸೂರ್‌

Last Updated 10 ಏಪ್ರಿಲ್ 2019, 17:02 IST
ಅಕ್ಷರ ಗಾತ್ರ

ಬೆಂಗಳೂರು:ಚೆಕ್‌ ಬೌನ್ಸ್‌ ಪ್ರಕರಣದ ವಿಚಾರಣೆಗೆ ಗೈರು ಹಾಜರಾಗಿದ್ದಮಾಜಿ ಸಚಿವ ಬಾಬುರಾವ್‌ ಚಿಂಚನಸೂರ್‌ ಅವರನ್ನು ಬುಧವಾರ ಮೂರು ತಾಸು ಪೊಲೀಸರ ವಶಕ್ಕೆ ನೀಡಿದ್ದ ಇಲ್ಲಿನ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯ ಬಳಿಕ ವಾರಂಟ್‌ ರಿಕಾಲ್‌ ಮಾಡಿತು.

ಮಾಜಿ ಸಚಿವರ ವಿರುದ್ಧ ಸೋಮವಾರ ಜಾಮೀನುರಹಿತ ವಾರಂಟ್‌ ಹೊರಡಿಸಲಾಗಿತ್ತು. ಬೆಳಿಗ್ಗೆ ಕೋರ್ಟ್‌ಗೆ ಹಾಜರಾದ ಚಿಂಚನಸೂರ್‌ ಅವರನ್ನು ಮಧ್ಯಾಹ್ನದವರೆಗೂ ಪೊಲೀಸರ ವಶಕ್ಕೆ ನೀಡಲಾಗಿತ್ತು.

ಚಿಂಚನಸೂರ್‌, 2011ರಲ್ಲಿ ನಾಗರಬಾವಿ ನಿವಾಸಿ ಅಂಜನಾ ಶಾಂತವೀರ್‌ ಅವರಿಂದ ₹11.88 ಕೋಟಿ ಸಾಲ ಪಡೆದಿದ್ದರು. ಇದಕ್ಕೆ 2015ರ ಏಪ್ರಿಲ್‌ 30ರ ದಿನಾಂಕ ನಮೂದಿಸಿ ಚೆಕ್‌ ನೀಡಿದ್ದರು. ಈ ಚೆಕ್‌ ಬೌನ್ಸ್‌ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT