ಮಂಗಳವಾರ ನಾರಾಯಣಸ್ವಾಮಿ ಎಂಬ ಹೆಸರಿನ ಮತ್ತಿಬ್ಬರು ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿದಿದ್ದಾರೆ. ಚಿತ್ರದುರ್ಗದ ಸಿ.ಎಚ್. ನಾರಾಯಣಸ್ವಾಮಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ದ್ಯಾವರಹಳ್ಳಿಯ ಡಿ.ಸಿ. ನಾರಾಯಣಸ್ವಾಮಿ ಉಮೇದುವಾರಿಕೆ ಸಲ್ಲಿಸಿದವರು. ಡಿ.ಸಿ. ನಾರಾಯಣಸ್ವಾಮಿ ಈ ಹಿಂದೆ ವಿಧಾನಸಭಾ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ ಅನುಭವ ಹೊಂದಿದ್ದಾರೆ.