ಗುಜರಾತಿನ ಅಹಮದಾಬಾದ್ ನಿಂದ ಮೇ 5ರಂದು ಜಿಲ್ಲೆಗೆ ಮರಳಿದ 15 ಜನರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಇವರಲ್ಲಿ ನಾಲ್ವರು ಗುಜರಾತಿನಲ್ಲಿ ಇದ್ದಾಗಲೇ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆದಿದ್ದರು. ಕ್ವಾರಂಟೈನ್ ನಲ್ಲಿ ಇದ್ದ ಇವರಿಗೆ ಮನೆ ಊಟ ನೀಡಲು ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿತ್ತು. ಹೀಗೆ ಮನೆ ಊಟ ನೀಡಿ ಸೋಂಕಿತರೊಂದಿಗೆ ಕಾಲ ಕಳೆದಿದ್ದವರನ್ನು ಕ್ವಾರಂಟೈನ್ ಮಾಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಆದರೆ, ಅವರು ಮನೆಯಿಂದ ನಾಪತ್ತೆಯಾಗಿದ್ದು, ಹುಡುಕಾಟ ನಡೆಯುತ್ತಿದೆ.