ಚಿಕ್ಕಜಾಜೂರು: ಹಸುಗಳಿಗೆ ಕಲ್ಲಿನ ಕ್ವಾರಿಯಲ್ಲಿ ಸಂಗ್ರಹಗೊಂಡಿದ್ದ ನೀರು ಕುಡಿಸಲು ಹೋಗಿ ಕಾಲು ಜಾರಿ ಬಿದ್ದು ಬುಧವಾರ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.
ಸಮೀಪದ ದಾಸರಹಳ್ಳಿಯ ಅಬ್ಬಿಗೆರೆ ಗೊಲ್ಲರಹಟ್ಟಿ ಗ್ರಾಮದ ಜಯಪ್ಪ ಅವರ ಪುತ್ರರಾದ ನಂದನ್ (14), ಪವನ್ (12) ಮೃತಪಟ್ಟವರು.
ಒಬ್ಬ ಬಾಲಕ ಕಾಲು ಜಾರಿ ಬಿದ್ದು, ನೀರಿನಲ್ಲಿ ಮುಳುಗುತ್ತಿದ್ದಂತೆ ಆತನನ್ನು ರಕ್ಷಣೆ ಮಾಡಲು ಹೋದ ಮತ್ತೊಬ್ಬ ಬಾಲಕನೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.ಗ್ರಾಮಸ್ಥರು ಮೃತ ದೇಹಗಳನ್ನು ಹೊರಗೆ ತೆಗೆದಿದ್ದಾರೆ ಎಂದು ಪಿಎಸ್ಐ ಮೋಹನ್ಕುಮಾರ್ ತಿಳಿಸಿದ್ದಾರೆ.
ಡಿವೈಎಸ್ಪಿ ಪಾಂಡುರಂಗಪ್ಪ, ಸಿಪಿಐ ರವೀಶ್, ತಹಶೀಲ್ದಾರ್ ನಾಗರಾಜ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.