ಸಿಸಿಬಿ ಅಧಿಕಾರಿಗಳಲ್ಲದೆ, ನಗರದ ಕೆಲ ಪೊಲೀಸ್ ಅಧಿಕಾರಿಗಳೂ ಸಿಗರೇಟ್ ವಿತರಕರಿಂದ ಹಣ ವಸೂಲು ಮಾಡಿರುವ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸುಳಿವು ಸಿಕ್ಕಿದೆ. ಆದರೆ, ಈ ಬಗ್ಗೆ ಮಾಹಿತಿ ನೀಡಲು ಯಾರೂ ಮುಂದೆ ಬರುತ್ತಿಲ್ಲ. ಹಿರಿಯ ಅಧಿಕಾರಿಗಳೂ ಹೆಚ್ಚು ತಲೆಕೆಡಿಸಿಕೊಳ್ಳದೆ ತಟಸ್ಥರಾಗಿದ್ದಾರೆ. ಈ ಹಗರಣದ ಬಗ್ಗೆ ಬೇರೆ ಸಂಸ್ಥೆಯಿಂದ ವಿಚಾರಣೆ ನಡೆದರೆ ಪೂರ್ಣ ಸತ್ಯ ಹೊರಬರಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದರು.