ಸುಳ್ವಾಡಿ ಮಾರಮ್ಮ ದೇವಸ್ಥಾನದ ದುರಂತದ ಬೆನ್ನಲ್ಲೇ, 20 ಅಂಶಗಳನ್ನು ಒಳಗೊಂಡ ಸುತ್ತೋಲೆ ಹೊರಡಿಸಿ, ‘ಅಡುಗೆ ಕೋಣೆಗೆ ಯಾರೇ ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಕಟ್ಟುನಿಟ್ಟಾಗಿ ಎಚ್ಚರ ವಹಿಸಬೇಕು’ ಎಂದು ಸೂಚಿಸಿದೆ. ಪ್ರಸಾದ ಸ್ವೀಕರಿಸಲು ಯೋಗ್ಯವಾಗಿದೆ ಎಂದು ಖಚಿತಪಡಿಸಿಕೊಂಡು ವಿತರಣೆ ಮಾಡಬೇಕು. ಭಕ್ತಾದಿಗಳಿಗೆ ಪ್ರಸಾದ ವಿತರಿಸುವ ಮುನ್ನ ಪೂರ್ವಭಾವಿ ಅನುಮತಿ ಪಡೆಯಬೇಕು. ಇದನ್ನು ಆರೋಗ್ಯ ಇಲಾಖೆಯ ಆಹಾರ ಸುರಕ್ಷತಾ ತಂಡದಿಂದ ಪರೀಕ್ಷೆಗೆ ಒಳಪಡಿಸಬೇಕು ಎಂದೂ ತಿಳಿಸಲಾಗಿದೆ.