ಪಾಕಿಸ್ತಾನ, ಅಫ್ಗಾನಿಸ್ತಾನ, ಬಾಂಗ್ಲಾದಿಂದ ಭಾರತಕ್ಕೆ ನುಸುಳಿ ಬಂದಿದ್ದು, 14 ವರ್ಷಗಳಲ್ಲಿ 11 ವರ್ಷ ದೇಶದಲ್ಲೇ ಇದ್ದರೆ ಅಂತಹವರಿಗೆ ಪೌರತ್ವ ಸಿಗುತ್ತದೆ. 2014ರ ವರೆಗೂ ದೇಶದಲ್ಲಿ ನೆಲೆಸಿದ್ದು, ಆಧಾರ್ ಕಾರ್ಡ್, ಪಡಿತರ ಚೀಟಿಯಲ್ಲಿ ಹೆಸರು ನೋಂದಾಯಿಸಿದ್ದವರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ವಲಸೆ ಬಂದವರಿಂದ ಆಗುತ್ತಿರುವ ಸಮಸ್ಯೆಗಳನ್ನು ಮನಗಂಡು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಪೌರತ್ವ (ತಿದ್ದುಪಡಿ) ಕಾಯಿದೆ ರೂಪಿಸಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.