ರಮೇಶ್ ಜಿಗಜಿಣಗಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಅವರು, ‘ರಾಜ್ಯ ಸರ್ಕಾರ ಬೆಳೆ ಹಾನಿ, ನಷ್ಟ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ ಬಹಳ ದಿನಗಳಾಗಿವೆ. ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಅವರಿಗೆ ಮಾಹಿತಿ ಕೊರತೆಯಿಂದ ಆ ಬಗ್ಗೆ ಮಾಹಿತಿ ಇಲ್ಲ ಎನಿಸುತ್ತದೆ. ಮಾಹಿತಿ ಕೊರತೆ ಇದ್ದವರು ಹೇಗೆ ಸಮೀಕ್ಷೆ ಮಾಡುತ್ತಾರೋ ಗೊತ್ತಿಲ್ಲ’ ಎಂದು ಹೇಳಿದರು.