ಬೆಂಗಳೂರು: ರಾಜ್ಯದಲ್ಲಿ ಮೋಡ ಬಿತ್ತನೆಯನ್ನು ಸಂಪೂರ್ಣ ನಿಲ್ಲಿಸಲಾಗಿದೆ. ಅದನ್ನು ಮುಂದುವರಿಸುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ ಅವರು, ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಉತ್ತಮ ಮಳೆ ಆಗಿರುವುದರಿಂದ ಅದನ್ನು ಮುಂದುವರಿಸುವ ಪ್ರಶ್ನೆಯೇ ಇಲ್ಲ ಎಂದರು.