ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಲ್‌ಪಿ ಸಭೆ 18ರಂದು: ದಿನೇಶ್‌

Last Updated 9 ಡಿಸೆಂಬರ್ 2018, 20:30 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಬೆಳಗಾವಿಯ ಸುವರ್ಣಸೌಧದಲ್ಲಿ 18ರಂದು ಬೆಳಿಗ್ಗೆ ನಡೆಯಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.

‘ಪೂರ್ವನಿಗದಿತ ಕಾರ್ಯಕ್ರಮದಂತೆ ಸಿದ್ದರಾಮಯ್ಯ ವಿದೇಶಕ್ಕೆ ಹೋಗುತ್ತಿದ್ದಾರೆ. ಎರಡನೇ ವಾರದಲ್ಲಿ ಅವರು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಗೊಂದಲ ಬೇಡ’ ಎಂದು ಸಮರ್ಥನೆ ನೀಡಿದರು.

‘ಅಧಿವೇಶನದಲ್ಲಿ ಪಾಲ್ಗೊಳ್ಳಲು ಯಾವುದೇ ಭೀತಿ, ಹಿಂಜರಿಕೆ ಇಲ್ಲ. ವಿರೋಧ ಪಕ್ಷವನ್ನು ಎದುರಿಸಲು ನಮ್ಮ ಪಕ್ಷದ ನಾಯಕರು ಸಮರ್ಥರಿದ್ದಾರೆ’ ಎಂದರು.

ಸಚಿವ ಸ್ಥಾನ ಆಕಾಂಕ್ಷಿ ಶಾಸಕರ ಅತೃಪ್ತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘22ರಂದು ಸಚಿವ ಸಂಪುಟ ವಿಸ್ತರಣೆ ಖಚಿತ. ಅಧಿವೇಶನದಲ್ಲಿ ಭಾಗವಹಿಸುವುದಕ್ಕೂ ಸಚಿವ ಸ್ಥಾನಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT