ಅನಾಹುತ ನಡೆದು ಎರಡು ತಿಂಗಳು ಕಳೆದರೂ ಪರಿಹಾರ ಕಾರ್ಯಗಳು ಚುರುಕಾಗಿಲ್ಲ. ರಾಜ್ಯದ ವಿವಿಧೆಡೆಯಿಂದ ಅಪಾರ ದೇಣಿಗೆ ಬಂದಿದ್ದರೂ ಸಂತ್ರಸ್ತರಿಗೆ ತಲುಪುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಕಾಫಿ ಬೆಳೆಗಾರರು, ಸಂತ್ರಸ್ತರು ಹಾಗೂ ಕೊಡವ ನ್ಯಾಷನಲ್ ಕೌನ್ಸಿಲ್ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ, ಸಂತ್ರಸ್ತರ ಬೇಡಿಕೆ ಆಲಿಸಲು ಮುಖ್ಯಮಂತ್ರಿ ಮಡಿಕೇರಿಗೆ ಬರುತ್ತಿದ್ದಾರೆ.