ಬೆಂಗಳೂರು:ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಭಾರಿ ಮುಖಭಂಗ ಅನುಭವಿಸಿರುವ ಮೈತ್ತಿ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಅನೌಪಚಾರಿಕ ಸಭೆ ಕರೆದಿದ್ದಾರೆ.
ದೇವೇಗೌಡರ ಮನೆಯಲ್ಲಿ ಕುಮಾರಸ್ವಾಮಿ ಮತ್ತು ಪಕ್ಷದ ಶಾಸಕರ ಸಭೆ ನಡೆಯುತ್ತಿದೆ. ರಾಜ್ಯ ಸರ್ಕಾರ ರಾಜೀನಾಮೆ ಕೊಡುವ ವಿಷಯಕ್ಕೆ ಜೆಡಿಎಸ್ ಶಾಸಕರ ಒಲವು ವ್ಯಕ್ತಪಡಿಸಿಲ್ಲ.
ಶುಕ್ರವಾರ ಬೆಳಿಗ್ಗೆ ಅನೌಪಚಾರಿಕ ಸಂಪುಟ ಸಭೆ ನಡೆಯಲಿದ್ದು, ಸರ್ಕಾರದ ಮೈತ್ರಿ ಪಕ್ಷವಾದ ಕಾಂಗ್ರೆಸ್ನ ನಿಲುವನ್ನು ಗಮನಿಸಿ, ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಗೊತ್ತಾಗಿದೆ.